ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

May 6, 2021
2:37 PM

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

Advertisement

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group