ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

May 6, 2021
2:37 PM

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

Advertisement
Advertisement
Advertisement
Advertisement

Advertisement

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror