Advertisement
MIRROR FOCUS

ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

Share

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

33 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

17 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago