Advertisement
MIRROR FOCUS

ಕೊರೋನಾ ಭಯ ಬಿಡಿ ಧೈರ್ಯವಾಗಿರಿ | ಜನರಿಗೆ ಧೈರ್ಯ ತುಂಬಿದ ಗ್ರಾಮ ಭಾರತ ತಂಡದ ಸದಸ್ಯರು |

Share

ಕೊರೋನಾ ಪಾಸಿಟಿವ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.

Advertisement
Advertisement

Advertisement

ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್‌ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್‌ ಕಂಡುಬಂದಿರುವ ಮತ್ತು  ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್‌ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು  ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ  ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು  ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ   ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.

ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ,  ಭರತ್ ಕೆವಿ, ವಸಂತ ಮೊಗ್ರ  ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್‌ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್‌ ಪುಚ್ಚಪ್ಪಾಡಿ ಮೊದಲಾದವರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…

2 hours ago

ಶಂಕರರ ಆಕ್ರೋಶಕ್ಕೆ ಹೊರಹೊಮ್ಮಿದ ಭಜಗೋವಿಂದಂ

ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…

2 hours ago

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

16 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

17 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

1 day ago