ಕೊರೋನಾ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.
ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್ ಕಂಡುಬಂದಿರುವ ಮತ್ತು ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.
ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ, ಭರತ್ ಕೆವಿ, ವಸಂತ ಮೊಗ್ರ ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…