ಕೊರೋನಾ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.
ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್ ಕಂಡುಬಂದಿರುವ ಮತ್ತು ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.
ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ, ಭರತ್ ಕೆವಿ, ವಸಂತ ಮೊಗ್ರ ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…