ಕೊರೋನಾ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.
ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್ ಕಂಡುಬಂದಿರುವ ಮತ್ತು ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.
ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ, ಭರತ್ ಕೆವಿ, ವಸಂತ ಮೊಗ್ರ ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…