ಕೊರೋನಾ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಜನರಿಗೆ ಧೈರ್ಯ ತುಂಬುವ ಕಾರ್ಯವನ್ನು ಸುಳ್ಯ ತಾಲೂಕಿನ ಗ್ರಾಮ ಭಾರತ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ನಡೆಸಿದರು.
ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಕಂಡುಬಂದು ಸಂಪೂರ್ಣ ಗುಣಮುಖರಾದವರ ಮನೆಗೆ ಹಾಗೂ ಪಾಸಿಟಿವ್ ಕಂಡುಬಂದಿರುವ ಮತ್ತು ಸಾಮಾನ್ಯ ಜ್ವರ ಬಂದಿರುವ ಮನೆಗಳಿಗೆ ಭೇಟಿ ನೀಡಿದ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾ ಪಂ ಒಂದನೇ ವಾರ್ಡ್ ನ ಗ್ರಾಮ ಭಾರತದ ತಂಡದ ಗ್ರಾ ಪಂ ಸದಸ್ಯರು ಹಾಗೂ ಗ್ರಾಮ ಭಾರತ ತಂಡದ ಸದಸ್ಯರು ಧೈರ್ಯ ತುಂಬಿದರು. ಜ್ವರ ಪೀಡಿತರ ಮನೆಗೆ ತೆರಳಿ ಮಾನಸಿಕ ಧೈರ್ಯ ತುಂಬುವುದು, ಮನೆ ಪರಿಸ್ಥಿತಿ ಗಮನಿಸಿ ಅಗತ್ಯ ವಸ್ತುಗಳ ವಿತರಣೆ ಮತ್ತು ಔಷಧಿಯ ಸಲಹೆ , ತುರ್ತು ಚಿಕಿತ್ಸೆಗೆ ಬೇಕಾದ ನೆರವಿಗೆ ಮಾಹಿತಿ ನೀಡಲಾಯಿತು. ಯಾವುದೇ ಕಾರಣಕ್ಕೂ ಗ್ರಾಮಸ್ಥರು ಭಯಗೊಳ್ಳುವ ಅವಶ್ಯಕತೆ ಇಲ್ಲ, ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸದಸ್ಯರು ಧೈರ್ಯ ತುಂಬಿದರು. ಯಾವುದೇ ಸಂದರ್ಭದಲ್ಲಿ ತುರ್ತು ಚಿಕಿತ್ಸೆ ಅಗತ್ಯವಿದ್ದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವಂತೆ ಸಲಹೆ ನೀಡಿದರು. ಯಾವುದೇ ಸಹಾಯ ಬೇಕಿದ್ದರೆ ಗ್ರಾ ಪಂ ಸದಸ್ಯರುಗಳಿಗೆ ಅಥವಾ ಸ್ವಯಂ ಸೇವಕರಿಗೆ ಮಾಹಿತಿ ನೀಡಲು ತಿಳಿಸಲಾಯಿತು.
ಈ ಸಂದರ್ಭ ಗ್ರಾ ಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ ಆಜಡ್ಕ, ಭರತ್ ಕೆವಿ, ವಸಂತ ಮೊಗ್ರ ಗ್ರಾಮ ಭಾರತದ ತಂಡದ ಸದಸ್ಯರುಗಳಾದ ಹರ್ಷಿತ್ ಕಾಂತಿಲ, ಬಾಬು ಕಮಿಲ, ರವೀಂದ್ರ ಆಜಡ್ಕ, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…