ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

May 10, 2021
9:04 PM
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror