Advertisement
MIRROR FOCUS

ಪಕ್ಕದ ರಾಜ್ಯ ಕೇರಳದಲ್ಲಿ ಮತ್ತೆ ಕೊರೊನಾ ಭೀತಿ | ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ |

Share

ಇಡೀ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ(Corona) ಹೆಸರು ಕೇಳಿದ್ರೆ ಕರಾಳ ದಿನಗಳು ನೆನಪಿಗೆ ಬರುತ್ತವೆ. ಕೊರೋನಾ ಕಡಿಮೆ ಆದ್ರೂ ಆಗಾಗ ಅಲ್ಲಿ ಬಂತು, ಇಲ್ಲಿ ಬಂತು, ಹೊಸ ರೂಪದಲ್ಲಿ ಬಂತು ಅನ್ನೋ ಮಾತುಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ(India) ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ(Woman) ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.  JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

The fear of Covid-19 has started again in India. It has been confirmed that Covid-19 subvariant JN.1 has been detected in a Kerala woman. On November 18, a throat sample of a 79-year-old woman was subjected to RT-PCR testing. He was found to be infected with a new subspecies. Mild symptoms of influenza-like illnesses (ILI) were found among them.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

1 hour ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

1 hour ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

11 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

11 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

12 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

20 hours ago