Advertisement
MIRROR FOCUS

ಪಕ್ಕದ ರಾಜ್ಯ ಕೇರಳದಲ್ಲಿ ಮತ್ತೆ ಕೊರೊನಾ ಭೀತಿ | ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ |

Share

ಇಡೀ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ(Corona) ಹೆಸರು ಕೇಳಿದ್ರೆ ಕರಾಳ ದಿನಗಳು ನೆನಪಿಗೆ ಬರುತ್ತವೆ. ಕೊರೋನಾ ಕಡಿಮೆ ಆದ್ರೂ ಆಗಾಗ ಅಲ್ಲಿ ಬಂತು, ಇಲ್ಲಿ ಬಂತು, ಹೊಸ ರೂಪದಲ್ಲಿ ಬಂತು ಅನ್ನೋ ಮಾತುಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ(India) ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ(Woman) ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.  JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

The fear of Covid-19 has started again in India. It has been confirmed that Covid-19 subvariant JN.1 has been detected in a Kerala woman. On November 18, a throat sample of a 79-year-old woman was subjected to RT-PCR testing. He was found to be infected with a new subspecies. Mild symptoms of influenza-like illnesses (ILI) were found among them.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

5 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

6 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

15 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

19 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

19 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago