Advertisement
MIRROR FOCUS

ಪಕ್ಕದ ರಾಜ್ಯ ಕೇರಳದಲ್ಲಿ ಮತ್ತೆ ಕೊರೊನಾ ಭೀತಿ | ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ |

Share

ಇಡೀ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ(Corona) ಹೆಸರು ಕೇಳಿದ್ರೆ ಕರಾಳ ದಿನಗಳು ನೆನಪಿಗೆ ಬರುತ್ತವೆ. ಕೊರೋನಾ ಕಡಿಮೆ ಆದ್ರೂ ಆಗಾಗ ಅಲ್ಲಿ ಬಂತು, ಇಲ್ಲಿ ಬಂತು, ಹೊಸ ರೂಪದಲ್ಲಿ ಬಂತು ಅನ್ನೋ ಮಾತುಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ(India) ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ(Woman) ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.  JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

The fear of Covid-19 has started again in India. It has been confirmed that Covid-19 subvariant JN.1 has been detected in a Kerala woman. On November 18, a throat sample of a 79-year-old woman was subjected to RT-PCR testing. He was found to be infected with a new subspecies. Mild symptoms of influenza-like illnesses (ILI) were found among them.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

1 hour ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

1 hour ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

2 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

15 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago