Advertisement
MIRROR FOCUS

ಪಕ್ಕದ ರಾಜ್ಯ ಕೇರಳದಲ್ಲಿ ಮತ್ತೆ ಕೊರೊನಾ ಭೀತಿ | ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ |

Share

ಇಡೀ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದ ಕೊರೋನಾ(Corona) ಹೆಸರು ಕೇಳಿದ್ರೆ ಕರಾಳ ದಿನಗಳು ನೆನಪಿಗೆ ಬರುತ್ತವೆ. ಕೊರೋನಾ ಕಡಿಮೆ ಆದ್ರೂ ಆಗಾಗ ಅಲ್ಲಿ ಬಂತು, ಇಲ್ಲಿ ಬಂತು, ಹೊಸ ರೂಪದಲ್ಲಿ ಬಂತು ಅನ್ನೋ ಮಾತುಗಳು ಕೇಳಿ ಬರುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ(India) ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ(Woman) ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ.

ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಲ್‌ ಉಪತಳಿ ಜೆಎನ್‌.1 ವಿಶ್ವದಲ್ಲೇ ಮೊದಲ ಪ್ರಕರಣ ಅಮೆರಿಕದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ವ್ಯಕ್ತಿಗಳು ಮನೆಯಲ್ಲಿ ಪ್ರತ್ಯೇಕವಾಗಿರಬೇಕು ಎಂದು ಮೂಲಗಳು ಸೂಚಿಸಿವೆ.

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರೊಬ್ಬರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪತಳಿ ಪತ್ತೆಯಾಗಿತ್ತು. ಅವರು ಅಕ್ಟೋಬರ್ 25 ರಂದು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ತಿರುಚಿರಾಪಳ್ಳಿ ಜಿಲ್ಲೆ ಅಥವಾ ತಮಿಳುನಾಡಿನ ಇತರ ಪ್ರದೇಶಗಳಲ್ಲಿ ಈ ರೂಪಾಂತರಕ್ಕೆ ಸಂಬಂಧಿಸಿರುವ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ.  JN.1 ಉಪತಳಿಯು ಹಿಂದಿನ ಉಪತಳಿಗಳ ಲಕ್ಷಣವನ್ನೇ ಹೊಂದಿದೆ. JN.1 ಸಬ್‌ವೇರಿಯಂಟ್‌ನ ಬಹುಪಾಲು ರೂಪಾಂತರಗಳು ಸ್ಪೈಕ್ ಪ್ರೋಟೀನ್‌ನಲ್ಲಿ ಕೇಂದ್ರೀಕೃತವಾಗಿರುತ್ತವೆ. ಇದು ಸೋಂಕನ್ನು ತೀವ್ರಗೊಳಿಸುತ್ತದೆ.

The fear of Covid-19 has started again in India. It has been confirmed that Covid-19 subvariant JN.1 has been detected in a Kerala woman. On November 18, a throat sample of a 79-year-old woman was subjected to RT-PCR testing. He was found to be infected with a new subspecies. Mild symptoms of influenza-like illnesses (ILI) were found among them.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

5 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

13 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

21 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago