Advertisement
ರಾಷ್ಟ್ರೀಯ

ಕೊರೋನಾ ರೂಪಾಂತರ ವೈರಸ್ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ | ದಕ್ಷಿಣ ಆಫ್ರಿಕಾ ಸಂಸ್ಥೆ ಮಾಹಿತಿ |

Share

ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೊರೋನಾ ವೈರಸ್​ನ ಓಮಿಕ್ರಾನ್​ ರೂಪಾಂತರದ ಎರಡು ಹೊಸ ಉಪ ವರ್ಗಗಳನ್ನು ಕಂಡು ಹಿಡಿದಿದ್ದಾರೆ ಎಂದು  ಜೀನ್​​ ಸಿಕ್ವೇನ್ಸಿಂಗ್​ ಸಂಸ್ಥೆಗಳನ್ನು ನಡೆಸುತ್ತಿರುವ ತಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ.ಈ ವಂಶಾವಳಿಗಳಿಗೆ BA.4 ಮತ್ತು BA.5 ಎಂದು ಹೆಸರಿಸಲಾಗಿದೆ ಎಂದು ಟ್ವೀಟ್​ ಮೂಲಕ ತುಲಿಯೊ ಡಿ ಒಲಿವೇರಾ ಮಾಹಿತಿ ನೀಡಿದ್ದಾರೆ. ಈ ವಂಶಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಸೋಂಕನ್ನು ಹೆಚ್ಚಳಗೊಳಿಸಿಲ್ಲ ಎಂದು ತಿಳಿದುಬಂದಿದೆ.

ದಕ್ಷಿಣ ಆಫ್ರಿಕಾದಲ್ಲಿ ಅತಿ ಕಡಿಮೆ ಸೋಂಕುಗಳು, ಹಾಗೂ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಪ್ರಮಾಣದಲ್ಲಿ ಇಳಿಕೆ ಮತ್ತು ಸಾವಿನ ಸಂಖ್ಯೆಗಳನ್ನು ಗಮನಿಸಿದರೆ ಮುಂದುವರಿದ ಕೊರೋನಾ ರೂಪಾಂತರದ ಬಗ್ಗೆ ಎಚ್ಚರಿಕೆ ವಹಿಸಬೇಕೆ ಹೊರತು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿ. ಒಲಿವೇರಾ ಹೇಳಿದ್ದಾರೆ.

ನವೆಂಬರ್​​ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬೋಟ್ಸ್​ವಾನಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್​ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಆಫ್ರಿಕಾವು ಓಮಿಕ್ರಾನ್​​​ ಸೋಂಕಿನ ಅಲೆಯನ್ನು ಕಂಡ ಮೊದಲ ದೇಶವಾಗಿದೆ. ಆಸ್ಪತ್ರೆಗಳು ಹಾಗೂ ಸಾವಿನ ಸಂಖ್ಯೆಗಳಿಗೆ ಡೆಲ್ಟಾ ರೂಪಾಂತರಿಯು ಕಾರಣವಾಗಿದ್ದರೆ ಡಿಸೆಂಬರ್​ ತಿಂಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ದೈನಂದಿನ ಪ್ರಕರಣಗಳು ವರದಿಯಾಗಲು ಓಮಿಕ್ರಾನ್​ ರೂಪಾಂತರಿ ಕಾರಣವಾಗಿತ್ತು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

41 minutes ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago