Advertisement
MIRROR FOCUS

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ವೈರಸ್‌ ಹಾವಳಿ | ಒಟ್ಟು 35 ಜೆಎನ್.1 ಪಾಸಿಟಿವ್ | ರಾಜಧಾನಿ ಬೆಂಗಳೂರಿನಲ್ಲಿ ಅಧಿಕ

Share

ಕೊರೊನಾ(Corona) ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಚಳಿ(Winter) ಆರಂಭವಾಗುತ್ತಿದ್ದಂತೆ ಮತ್ತೆ ಕೊರೋನಾ ವೈರಸ್‌ ಹಾವಳಿ.ರಾಜ್ಯದಲ್ಲಿ 35 ಜೆಎನ್.1 (JN.1) ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ (Bengaluru) ಹೆಚ್ಚು ಸಂಖ್ಯೆ ಇದ್ದ ಹಾಗೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಆದರೆ ಹೊಸ ವರ್ಷ ಆಚರಣೆಗೆ ಸದ್ಯದ ಮಟ್ಟಿಗೆ ಯಾವುದೇ ರೂಲ್ಸ್‌ ಮಾಡಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆ ಜಿಲ್ಲಾವಾರು ಮಾಹಿತಿ ನೀಡಲಾಗುತ್ತದೆ. ನಾಳೆ ಸಬ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಕುರಿತು ಚರ್ಚೆ ಮಾಡಲಾಗುತ್ತದೆ. ತಜ್ಞರ ಜೊತೆ ಉಪ ಸಮಿತಿ ಸಭೆ ಮಾಡಲಾಗುತ್ತದೆ. ಜೆಎನ್.1 ಬಂದ ಬಗ್ಗೆ ಮಾಹಿತಿ ಇತ್ತು. ಅಧಿಕೃತವಾಗಿ ತಿಳಿಯಲು ಮಾತ್ರ ಸ್ಯಾಂಪಲ್ ಕಳುಹಿಸಲಾಗಿತ್ತು. ಸದ್ಯ ಯಾವುದೇ ಮಾರ್ಗಸೂಚಿ ಬರಲ್ಲ. ಇಡೀ ದೇಶದಲ್ಲಿ ಮಾರ್ಗಸೂಚಿ ಜಾರಿ ಇಲ್ಲ. ಜನ ಗುಂಪಾಗಿ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಇರಲ್ಲ. ಪಾಸಿಟಿವ್ ಬಂದವರು ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದರು.

ಜೆಎನ್.1 ಬಂದಿದೆ ಅನ್ನೋ ಮಾಹಿತಿ ಇತ್ತು. ಸಿಎಂ ಹೇಳಿದ್ರು, ನಾನು ಹೇಳಿದ್ದೆ, WHO ಕೂಡ ಹೇಳಿತ್ತು. ಹೊಸದಾಗಿ ಗಾಬರಿ ಆಗುವಂತಹದ್ದು ಏನಿಲ್ಲ. ಎಚ್ಚರಿಕೆಯಿಂದ ಇರಿ ಎಂದು WHO ಕೂಡ ಹೇಳಿದೆ. ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅವರಿಗೆ ಬೇರೆ ಬೇರೆ ರೋಗದ ಜೊತೆ ಸೋಂಕು ಕೂಡ ಇತ್ತು. ಜೆಎನ್.1 ಸೋಂಕಿನ ಬಗ್ಗೆ ಆಶ್ಚರ್ಯ ಪಡುವ ಅವಶ್ಯಕತೆ ಇಲ್ಲ. ಜನರು ಸೋಂಕಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಸತ್ತವರಲ್ಲಿ ಜೆಎನ್.1 ಪತ್ತೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 35 ಜೆಎನ್.1 ವೈರಸ್ ಇರುವ ಮಾಹಿತಿ ಇದೆ. ಬಹುತೇಕ ಕೇಸ್‌ಗಳು ಬೆಂಗಳೂರಲ್ಲೇ ಇರುವ ಸಾಧ್ಯತೆಯಿದೆ. ನಾಳೆ ಸಂಪೂರ್ಣ ಮಾಹಿತಿ ತಿಳಿಸುತ್ತೇವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸಭೆ ಇದೆ. ಸಭೆಯಲ್ಲಿ ಎಲ್ಲಾ ಮಾಹಿತಿ ನೀಡುತ್ತೇವೆ. ಜಿನೋಮಿಕ್ ಸೀಕ್ವೆನ್ಸ್‌ಗೆ ಸ್ಯಾಂಪಲ್ ಕಳುಹಿಸಲಾಗಿತ್ತು. ಜೆಎನ್.1 ಕೇಸ್ ಇದೆ ಅನ್ನೋದು ಮೊದಲೇ ಗೊತ್ತಿತ್ತು. ಹೊಸ ವರ್ಷಕ್ಕೆ (New Year) ಎಲ್ಲೂ ಹೊಸ ಮಾರ್ಗಸೂಚಿ ಇಲ್ಲ. ಯಾವುದೇ ರೀತಿ ಗೈಡ್‌ಲೈನ್ಸ್ ಸದ್ಯ ಬಿಟ್ಟಿಲ್ಲ. ನಾಳೆ ಮಧ್ಯಾಹ್ನದ ನಂತರ ಆ ಬಗ್ಗೆ ತಿಳಿಸುತ್ತೇವೆ ಎಂದು ಮಾಹಿತಿ ನೀಡಿದರು. ಸಭೆಯ ಬಳಿಕ ಮುಂದಿನ ರೂಲ್ಸ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯ ಆತಂಕಗೊಳ್ಳುವ ಅಗತ್ಯವಿಲ್ಲ. ಜೆಎನ್.1ರಿಂದಲೇ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದೆ. ಹೊಸ ವರ್ಷದ ಆಚರಣೆಗೆ ನಾಳೆಯ ಸಭೆಯ ಬಳಿಕ ತಿಳಿಸುತ್ತೇವೆ. ಸದ್ಯಕ್ಕೆ ಯಾವುದೇ ರೂಲ್ಸ್ ಇಲ್ಲ ಎಂದರು.

Corona (Corona) new mutant JN.1 virus is increasing day by day. As the winter begins, the corona virus is once again plagued. 35 JN.1 (JN.1) have come positive in the state. Health Minister Dinesh Gundu Rao said that there is a high number in Bengaluru.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

3 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

11 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

16 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

16 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

17 hours ago