Advertisement
MIRROR FOCUS

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ವೈರಸ್‌ ಹಾವಳಿ | ಒಟ್ಟು 35 ಜೆಎನ್.1 ಪಾಸಿಟಿವ್ | ರಾಜಧಾನಿ ಬೆಂಗಳೂರಿನಲ್ಲಿ ಅಧಿಕ

Share

ಕೊರೊನಾ(Corona) ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಚಳಿ(Winter) ಆರಂಭವಾಗುತ್ತಿದ್ದಂತೆ ಮತ್ತೆ ಕೊರೋನಾ ವೈರಸ್‌ ಹಾವಳಿ.ರಾಜ್ಯದಲ್ಲಿ 35 ಜೆಎನ್.1 (JN.1) ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ (Bengaluru) ಹೆಚ್ಚು ಸಂಖ್ಯೆ ಇದ್ದ ಹಾಗೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಆದರೆ ಹೊಸ ವರ್ಷ ಆಚರಣೆಗೆ ಸದ್ಯದ ಮಟ್ಟಿಗೆ ಯಾವುದೇ ರೂಲ್ಸ್‌ ಮಾಡಿಲ್ಲ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಾಳೆ ಜಿಲ್ಲಾವಾರು ಮಾಹಿತಿ ನೀಡಲಾಗುತ್ತದೆ. ನಾಳೆ ಸಬ್ ಕಮಿಟಿ ಸಭೆ ಇದೆ. ಅದರಲ್ಲಿ ಈ ಕುರಿತು ಚರ್ಚೆ ಮಾಡಲಾಗುತ್ತದೆ. ತಜ್ಞರ ಜೊತೆ ಉಪ ಸಮಿತಿ ಸಭೆ ಮಾಡಲಾಗುತ್ತದೆ. ಜೆಎನ್.1 ಬಂದ ಬಗ್ಗೆ ಮಾಹಿತಿ ಇತ್ತು. ಅಧಿಕೃತವಾಗಿ ತಿಳಿಯಲು ಮಾತ್ರ ಸ್ಯಾಂಪಲ್ ಕಳುಹಿಸಲಾಗಿತ್ತು. ಸದ್ಯ ಯಾವುದೇ ಮಾರ್ಗಸೂಚಿ ಬರಲ್ಲ. ಇಡೀ ದೇಶದಲ್ಲಿ ಮಾರ್ಗಸೂಚಿ ಜಾರಿ ಇಲ್ಲ. ಜನ ಗುಂಪಾಗಿ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಇರಲ್ಲ. ಪಾಸಿಟಿವ್ ಬಂದವರು ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ ಎಂದರು.

Advertisement

ಜೆಎನ್.1 ಬಂದಿದೆ ಅನ್ನೋ ಮಾಹಿತಿ ಇತ್ತು. ಸಿಎಂ ಹೇಳಿದ್ರು, ನಾನು ಹೇಳಿದ್ದೆ, WHO ಕೂಡ ಹೇಳಿತ್ತು. ಹೊಸದಾಗಿ ಗಾಬರಿ ಆಗುವಂತಹದ್ದು ಏನಿಲ್ಲ. ಎಚ್ಚರಿಕೆಯಿಂದ ಇರಿ ಎಂದು WHO ಕೂಡ ಹೇಳಿದೆ. ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅವರಿಗೆ ಬೇರೆ ಬೇರೆ ರೋಗದ ಜೊತೆ ಸೋಂಕು ಕೂಡ ಇತ್ತು. ಜೆಎನ್.1 ಸೋಂಕಿನ ಬಗ್ಗೆ ಆಶ್ಚರ್ಯ ಪಡುವ ಅವಶ್ಯಕತೆ ಇಲ್ಲ. ಜನರು ಸೋಂಕಿನ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಸತ್ತವರಲ್ಲಿ ಜೆಎನ್.1 ಪತ್ತೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 35 ಜೆಎನ್.1 ವೈರಸ್ ಇರುವ ಮಾಹಿತಿ ಇದೆ. ಬಹುತೇಕ ಕೇಸ್‌ಗಳು ಬೆಂಗಳೂರಲ್ಲೇ ಇರುವ ಸಾಧ್ಯತೆಯಿದೆ. ನಾಳೆ ಸಂಪೂರ್ಣ ಮಾಹಿತಿ ತಿಳಿಸುತ್ತೇವೆ. ನಾಳೆ ಮಧ್ಯಾಹ್ನ 12 ಗಂಟೆಗೆ ಸಭೆ ಇದೆ. ಸಭೆಯಲ್ಲಿ ಎಲ್ಲಾ ಮಾಹಿತಿ ನೀಡುತ್ತೇವೆ. ಜಿನೋಮಿಕ್ ಸೀಕ್ವೆನ್ಸ್‌ಗೆ ಸ್ಯಾಂಪಲ್ ಕಳುಹಿಸಲಾಗಿತ್ತು. ಜೆಎನ್.1 ಕೇಸ್ ಇದೆ ಅನ್ನೋದು ಮೊದಲೇ ಗೊತ್ತಿತ್ತು. ಹೊಸ ವರ್ಷಕ್ಕೆ (New Year) ಎಲ್ಲೂ ಹೊಸ ಮಾರ್ಗಸೂಚಿ ಇಲ್ಲ. ಯಾವುದೇ ರೀತಿ ಗೈಡ್‌ಲೈನ್ಸ್ ಸದ್ಯ ಬಿಟ್ಟಿಲ್ಲ. ನಾಳೆ ಮಧ್ಯಾಹ್ನದ ನಂತರ ಆ ಬಗ್ಗೆ ತಿಳಿಸುತ್ತೇವೆ ಎಂದು ಮಾಹಿತಿ ನೀಡಿದರು. ಸಭೆಯ ಬಳಿಕ ಮುಂದಿನ ರೂಲ್ಸ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸದ್ಯ ಆತಂಕಗೊಳ್ಳುವ ಅಗತ್ಯವಿಲ್ಲ. ಜೆಎನ್.1ರಿಂದಲೇ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿದೆ. ಹೊಸ ವರ್ಷದ ಆಚರಣೆಗೆ ನಾಳೆಯ ಸಭೆಯ ಬಳಿಕ ತಿಳಿಸುತ್ತೇವೆ. ಸದ್ಯಕ್ಕೆ ಯಾವುದೇ ರೂಲ್ಸ್ ಇಲ್ಲ ಎಂದರು.

Advertisement
Corona (Corona) new mutant JN.1 virus is increasing day by day. As the winter begins, the corona virus is once again plagued. 35 JN.1 (JN.1) have come positive in the state. Health Minister Dinesh Gundu Rao said that there is a high number in Bengaluru.
- ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago