ಕೊರೋನಾ ವೈರಸ್‌ | ಭಾರತದಲ್ಲಿ 6 3 ಲಕ್ಷ ಪ್ರಕರಣದಲ್ಲಿ 52 ಲಕ್ಷ ಪ್ರಕರಣಗಳೂ ಗುಣಮುಖ

October 1, 2020
3:15 PM
ಗತ್ತಿನಾದ್ಯಂತ ಕೊರೋನಾ ವೈರಸ್‌ ಮಹಾಮಾರಿಯಾಗಿ ಕಾಡುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳು ಮಾತ್ರವೇ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪರಿಹಾರ ಮಾರ್ಗ ಎಂಬುದೂ ಈಗೀಗ ಸ್ಪಷ್ಟವಾಗುತ್ತಿದೆ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಇದರಲ್ಲಿ ಸುಮಾರು 52 ಲಕ್ಷ ಪ್ರಕರಣಗಳೂ ಗುಣಮುಖವಾಗಿವೆ. ಇದಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ ಕಾರಣವಾಗಿದೆ.

ಭಾರತದಲ್ಲಿ  ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ.  ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175  ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror