Advertisement
ರಾಷ್ಟ್ರೀಯ

ಕೊರೋನಾ ವೈರಸ್‌ | ಭಾರತದಲ್ಲಿ 6 3 ಲಕ್ಷ ಪ್ರಕರಣದಲ್ಲಿ 52 ಲಕ್ಷ ಪ್ರಕರಣಗಳೂ ಗುಣಮುಖ

Share
ಗತ್ತಿನಾದ್ಯಂತ ಕೊರೋನಾ ವೈರಸ್‌ ಮಹಾಮಾರಿಯಾಗಿ ಕಾಡುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳು ಮಾತ್ರವೇ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪರಿಹಾರ ಮಾರ್ಗ ಎಂಬುದೂ ಈಗೀಗ ಸ್ಪಷ್ಟವಾಗುತ್ತಿದೆ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಇದರಲ್ಲಿ ಸುಮಾರು 52 ಲಕ್ಷ ಪ್ರಕರಣಗಳೂ ಗುಣಮುಖವಾಗಿವೆ. ಇದಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ ಕಾರಣವಾಗಿದೆ.

ಭಾರತದಲ್ಲಿ  ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ.  ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175  ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

2 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

4 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

5 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

19 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

20 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

21 hours ago