ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…