ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…