ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…