ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…