ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…