ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…