Advertisement
ಅನುಕ್ರಮ

ಸ್ವಚ್ಛಂದ ಬದುಕಿಗೆ ಕೊರೋನಾ ಎಂಬ ಬೇಲಿ

Share
ಳೆದ ವರುಷ ಚೀನಾದ ವುಹಾನ್ ಎಂಬ ಪ್ರದೇಶದಲ್ಲಿ ಹುಟ್ಟಿಕೊಂಡ ಈ ಕೊರೋನಾವೆಂಬ ಮಾರಕ ವೈರಸ್ ಮುಂದೆ ವಿಶ್ವವಿಡೀ ವ್ಯಾಪಿಸಿ ಈ ರೀತಿ ಬದಲಾವಣೆಯನ್ನು ಉಂಟು ಮಾಡಬಹುದೆಂಬ ಕಲ್ಪನೆ ಬಹುಶಃ ಯಾರಿಗೂ ಇರಲಿಲ್ಲ. ಕೊರೋನಾ ಎಂಬ ಮಹಾಮಾರಿ ಬಂದ ಮೇಲೆ ಜನರ ಜೀವನ ಶೈಲಿ ಬದಲಾಗಿದ್ದಂತೂ ಸುಳ್ಳಲ್ಲ. ಈ ರೋಗ ಜಗತ್ತಿನ ಆರ್ಥಿಕತೆಯನ್ನೇ ಅಲ್ಲಾಡಿಸಿಬಿಟ್ಟಿತು. ಇದರಿಂದಾಗಿ ವಿಶ್ವದಾದ್ಯಂತ ಎಷ್ಟೋ ಮಹತ್ತರವಾದ ಬದಲಾವಣೆಗಳು ಉಂಟಾದವು. ತಮ್ಮ ಪಾಡಿಗೆ ಕೆಲಸ ಕಾರ್ಯಕ್ಕೆ ತೆರಳಿ ಜೀವನ ಸಾಗಿಸುತ್ತಿದ್ದ ಎಷ್ಟೋ ಮಂದಿ ಉದ್ಯೋಗವನ್ನು ಕಳೆದುಕೊಂಡರು. ಅದೆಷ್ಟೋ ಉದ್ದಿಮೆಗಳು ಹಳ್ಳ ಹಿಡಿದವು. ಕಾರ್ಮಿಕರು ಕೆಲಸ ಕಳೆದುಕೊಂಡು ಬವಣೆ ಅನುಭವಿಸಿದರು. ಪಟ್ಟಣಗಳಿಂದ ಮರಳಿ ಹಳ್ಳಿಯಲ್ಲಿ ಕೃಷಿ ಕಾಯಕವನ್ನು ಹಿಡಿದರು. ವಿದೇಶಿ ಜಾಡು ಹಿಡಿದು ವಿದೇಶಗಳಿಗೆ ತೆರಳಿದ್ದವರು ಸ್ವದೇಶಗಳಿಗೆ ಹಿಂತಿರುಗಿದರು. ಇಷ್ಟೆಲ್ಲಾಒಳಿತು ಕೆಡುಕುಗಳ ನಡುವೆ ಈಗ ಎಲ್ಲವೂ ಹಂತಹಂತವಾಗಿ ಸಹಜಸ್ಥಿತಿಗೆ ಮರಳಿ ಬರುತ್ತಿದೆ.

ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

9 minutes ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

8 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

12 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

17 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

23 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago