ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…