ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…