Advertisement
ಅನುಕ್ರಮ

ಸ್ವಚ್ಛಂದ ಬದುಕಿಗೆ ಕೊರೋನಾ ಎಂಬ ಬೇಲಿ

Share
ಳೆದ ವರುಷ ಚೀನಾದ ವುಹಾನ್ ಎಂಬ ಪ್ರದೇಶದಲ್ಲಿ ಹುಟ್ಟಿಕೊಂಡ ಈ ಕೊರೋನಾವೆಂಬ ಮಾರಕ ವೈರಸ್ ಮುಂದೆ ವಿಶ್ವವಿಡೀ ವ್ಯಾಪಿಸಿ ಈ ರೀತಿ ಬದಲಾವಣೆಯನ್ನು ಉಂಟು ಮಾಡಬಹುದೆಂಬ ಕಲ್ಪನೆ ಬಹುಶಃ ಯಾರಿಗೂ ಇರಲಿಲ್ಲ. ಕೊರೋನಾ ಎಂಬ ಮಹಾಮಾರಿ ಬಂದ ಮೇಲೆ ಜನರ ಜೀವನ ಶೈಲಿ ಬದಲಾಗಿದ್ದಂತೂ ಸುಳ್ಳಲ್ಲ. ಈ ರೋಗ ಜಗತ್ತಿನ ಆರ್ಥಿಕತೆಯನ್ನೇ ಅಲ್ಲಾಡಿಸಿಬಿಟ್ಟಿತು. ಇದರಿಂದಾಗಿ ವಿಶ್ವದಾದ್ಯಂತ ಎಷ್ಟೋ ಮಹತ್ತರವಾದ ಬದಲಾವಣೆಗಳು ಉಂಟಾದವು. ತಮ್ಮ ಪಾಡಿಗೆ ಕೆಲಸ ಕಾರ್ಯಕ್ಕೆ ತೆರಳಿ ಜೀವನ ಸಾಗಿಸುತ್ತಿದ್ದ ಎಷ್ಟೋ ಮಂದಿ ಉದ್ಯೋಗವನ್ನು ಕಳೆದುಕೊಂಡರು. ಅದೆಷ್ಟೋ ಉದ್ದಿಮೆಗಳು ಹಳ್ಳ ಹಿಡಿದವು. ಕಾರ್ಮಿಕರು ಕೆಲಸ ಕಳೆದುಕೊಂಡು ಬವಣೆ ಅನುಭವಿಸಿದರು. ಪಟ್ಟಣಗಳಿಂದ ಮರಳಿ ಹಳ್ಳಿಯಲ್ಲಿ ಕೃಷಿ ಕಾಯಕವನ್ನು ಹಿಡಿದರು. ವಿದೇಶಿ ಜಾಡು ಹಿಡಿದು ವಿದೇಶಗಳಿಗೆ ತೆರಳಿದ್ದವರು ಸ್ವದೇಶಗಳಿಗೆ ಹಿಂತಿರುಗಿದರು. ಇಷ್ಟೆಲ್ಲಾಒಳಿತು ಕೆಡುಕುಗಳ ನಡುವೆ ಈಗ ಎಲ್ಲವೂ ಹಂತಹಂತವಾಗಿ ಸಹಜಸ್ಥಿತಿಗೆ ಮರಳಿ ಬರುತ್ತಿದೆ.

ಆದರೂ ಬದುಕು ಮೊದಲಿನಂತಿಲ್ಲ. ಕೊರೋನಾ ಪೂರ್ವದಲ್ಲಿ ನಿರಾಯಾಸವಾಗಿ ಓಡಾಡುತ್ತಿದ್ದ ಮನುಷ್ಯನ ಸ್ವಾತಂತ್ರ್ಯಕ್ಕೆ ಸ್ವಲ್ಪ ಕಡಿವಾಣ ಬಿದ್ದಿದೆ ಎಂದರೆ ತಪ್ಪಾಗಲಾರದು. ಹೊರಗಡೆ ತೆರಳುವಾಗ ಮಾಸ್ಕ್ ಧರಿಸುವುದನ್ನು ಅವನು ಮರೆಯುವಂತಿಲ್ಲ. ಇದರೊಂದಿಗೆ ಹಲವು ನೀತಿನಿಯಮಗಳನ್ನು ಅವನು ಪಾಲಿಸಲೇ ಬೇಕು. ಎಲ್ಲಿಗೆ ತೆರಳುವುದಿದ್ದರೂ ಮನದಲ್ಲಿ ಕೊರೋನಾದ ಆತಂಕ ಇರುವುದಂತೂ ದಿಟ. ಕೊರೋನಾ ಎಂಬ ಪದ ಮಾನವನ ಸಹಜ ಜೀವನಕ್ಕೆ ಅಡ್ಡಿಯಾಗಿದೆ. ಈ ಮಾರಕ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಯಾರೇ ಹೇಳಿದರೂ ಪುನಃ ಹೊಸ ರೂಪದಲ್ಲಿ ಬಂದು ಕಾಡುತ್ತಿದೆ. ಎಲ್ಲೇ ಹೋದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ , ಮಾಸ್ಕ್ ಧರಿಸುವಿಕೆ ಹೀಗೆ ಅನೇಕ ನಿಯಮಗಳು ಮಾನವನ ಸ್ವಚ್ಛಂದ ಬದುಕಿಗೆ ಬೇಲಿ ಹಾಕಿರುವುದಂತೂ ಸುಳ್ಳಲ್ಲ. ಆದರೂ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಇವೆಲ್ಲವನ್ನೂ ನಾವು ಪಾಲಿಸಲೇಬೇಕಾಗಿದೆ. ಕೊರೋನಾ ನಿವಾರಣೆಗೆಂದು ಬಂದಿರುವ ಲಸಿಕೆ ಈ ಕೊರೋನಾ ಶಕೆ ಅಂತ್ಯಗೊಳಿಸಲಿ ಎಂಬುದೇ ಎಲ್ಲರ ಆಶಯ. ಇವೆಲ್ಲಾ ಸರಿಹೋಗಲು ಕಾಲಾವಕಾಶದ ಅಗತ್ಯವಂತೂ ಇದ್ದೇ ಇದೆ. ಹೀಗಾಗಿ ಅಲ್ಲಿಯವರೆಗೂ ಕಾಯುವುದೊಂದೇ ಮಾನವರಿಗೆ ಉಳಿದಿರುವ ದಾರಿ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

10 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago