ರೈತರ ಬೆಳೆ ಸಮೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
Advertisement
ಕೆಆರ್ ಪೇಟೆ ಸೇರಿದಂತೆ ವಿವಿಧ ತಾಲೂಕಿನಲ್ಲಿ ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ ಬೆಳೆದಿಲ್ಲ. ಆದರೆ, ಕೃಷಿ ಇಲಾಖೆ ಬೆಳೆ ಸಮೀಕ್ಷಾ ವರದಿಯಲ್ಲಿ ಶೇ.40 ರಷ್ಟು ಪ್ರದೇಶದಲ್ಲಿ ರೈತರು ರಾಗಿ ಬೆಳೆದಿದ್ದಾರೆಂದು ತೋರಿಸಲಾಗಿದೆ. ಇದರ ಹಿ೦ದೆ ರಾಗಿ ಖರೀದಿ ಕೇಂದ್ರದ ದಳ್ಳಾಳಿಗಳ ಕೈವಾಡವಿದೆ. ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಹಲವು ಕಡೆಗಳಲ್ಲಿ ಇದೇ ಮಾದರಿಯಲ್ಲಿ ನಡೆದಿದೆ. ಇದಕ್ಕಾಗಿ ಈ ಬಗ್ಗೆ ತನಿಖೆಯಾಗಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement