ಭಾರತೀಯ ಹತ್ತಿ ನಿಗಮ-ಸಿಸಿಐ, ಧಾರವಾಡದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿ ಕೈಗೊಳ್ಳಲಿದೆ. ರೈತರು ಅಕ್ಟೋಬರ್ 31 ರೊಳಗಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ ಪ್ರಕ್ರಿಯೆ ಇದೇ 21 ರಿಂದ ಪ್ರಾರಂಭವಾಗಲಿವೆ. ರಾಜ್ಯದ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಹತ್ತಿಯನ್ನು ಭಾರತೀಯ ಹತ್ತಿ ನಿಗಮಕ್ಕೆ ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ರೈತರು ನೋಂದಣಿ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಭಾರತೀಯ ಹತ್ತಿ ನಿಗಮದ ಶಾಖಾ ಮುಖ್ಯಸ್ಥರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…