Advertisement
ಪ್ರಮುಖ

#Indo-PakWorldCup | ಇಂಡೋ-ಪಾಕ್‌ ವಿಶ್ವ ಸಮರಕ್ಕೆ ಕ್ಷಣಗಣನೆ | ವಿಶ್ವಕಪ್ ಹಣಾಹಣೆಯಲ್ಲಿ ಭಾರತದ ಗೆಲುವಿಗೆ ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ |

Share

ವಿಶ್ವದ ಕ್ರಿಕೆಟ್‌ #Cricket ಅಭಿಮಾನಿಗಳು ಎದುರು ನೋಡುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ #ICCworldcup ಹೈವೋಲ್ಟೇಜ್ ಪಂದ್ಯವಾದ ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ.  ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ.

ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರವು ಬಗ್ಗುಬಡಿಯಲಿ, ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. ಅಭಿಮಾನಿಗಳ ಬೆಂಬಲವೂ ರೋಹಿತ್‌ ಶರ್ಮಾ ಪಡೆಯ ಬೆನ್ನಿಗೆ ಇರಲಿದೆ. 1992 ರಿಂದ 2019ರ ವರೆಗೂ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, 7 ಬಾರಿಯೂ ವಿಜಯದ ಮಾಲೆ ಹಾಕಿಕೊಂಡಿದೆ. ಈ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್ ಆಗಿದೆ. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದ್ದರೆ, ಮೊದಲ ಜಯ ಸಾಧಿಸಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ.

ಭಾರತ ತಂಡದಲ್ಲಿರುವ ಬ್ಯಾಟರ್‌ಗಳೆಲ್ಲರೂ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೌಲರ್‌ಗಳೂ ಒಬ್ಬರಿಗಿಂತ ಒಬ್ಬರು ದೊಡ್ಡ ರೆಕಾರ್ಡ್‌ ಮಾಡಿದವರಿದ್ದಾರೆ. ಈ ಪಂದ್ಯದಲ್ಲಿ ಲಯ, ಸಾಮರ್ಥ್ಯ, ಪ್ರತಿಭೆ ಇವೆಲ್ಲಕ್ಕಿಂತ ಮಿಗಿಲಾಗಿ ಯಾರು ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೋ ಅವರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆ. ಹೀಗಾಗಿ ರೋಹಿತ್‌ ಪಡೆಗಿರುವ ಅತಿದೊಡ್ಡ ಸವಾಲು ಭಾವನೆಗಳ ಬಂಧನಕ್ಕೆ ಒಳಗಾಗದಿರುವುದು.

ಅಫ್ಘಾನಿಸ್ತಾನ ವಿರುದ್ಧ ಸಿಡಿಲಬ್ಬರದ ಆಟವಾಡಿದ್ದ ರೋಹಿತ್, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದ್ದು, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಸಹ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ.  ಅಹಮದಾಬಾದ್‌ನ ಇತ್ತೀಚಿನ ದಾಖಲೆಯನ್ನು ಪರಿಗಣಿಸಿ, ವೇಗದ ಬೌಲರ್‌ಗಳಿಗೆ ಹೆಚ್ಚು ನೆರವು ಸಿಗಲಿದೆ ಎನ್ನುವ ನಂಬಿಕೆಯೊಂದಿಗೆ ಭಾರತ ಕಣಕ್ಕಿಳಿದರೆ ಮೊಹಮದ್ ಶಮಿಗೆ ಅವಕಾಶ ಸಿಗಬಹುದು. ಶಮಿ ಐಪಿಎಲ್‌ನಲ್ಲಿ ಗುಜರಾತ್ ತಂಡದಲ್ಲಿ ಆಡುವ ಕಾರಣ, ಇಲ್ಲಿನ ಪಿಚ್ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿ ಇರಲಿದೆ. ಒಂದು ವೇಳೆ ದೊಡ್ಡ ಬೌಂಡರಿಗಳು ಎನ್ನುವ ಅಂಶವನ್ನು ತಲೆಯಲ್ಲಿಟ್ಟುಕೊಂಡು ಆಡುವ ಹನ್ನೊಂದನ್ನು ನಿರ್ಧರಿಸಿದರೆ ಆಗ ಆರ್.ಅಶ್ವಿನ್‌ರನ್ನು ಆಡಿಸಬಹುದು ಎಂದು ಹೇಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

8 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

12 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

19 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

19 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago