Advertisement
ಪ್ರಮುಖ

#Indo-PakWorldCup | ಇಂಡೋ-ಪಾಕ್‌ ವಿಶ್ವ ಸಮರಕ್ಕೆ ಕ್ಷಣಗಣನೆ | ವಿಶ್ವಕಪ್ ಹಣಾಹಣೆಯಲ್ಲಿ ಭಾರತದ ಗೆಲುವಿಗೆ ಕೋಟ್ಯಂತರ ಅಭಿಮಾನಿಗಳ ಶುಭ ಹಾರೈಕೆ |

Share

ವಿಶ್ವದ ಕ್ರಿಕೆಟ್‌ #Cricket ಅಭಿಮಾನಿಗಳು ಎದುರು ನೋಡುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ #ICCworldcup ಹೈವೋಲ್ಟೇಜ್ ಪಂದ್ಯವಾದ ಭಾರತ- ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ ಶುರುವಾಗಿದೆ.  ಭಾರತ ಈಗ ನವರಾತ್ರಿ ಸಂಭ್ರಮಕ್ಕೆ ಅಣಿಯಾಗುತ್ತಿದೆ. ಈ ಪಂದ್ಯಕ್ಕಾಗಿ ಕೇವಲ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದೆ.

ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರವು ಬಗ್ಗುಬಡಿಯಲಿ, ಭಾರತ ಸಂಭ್ರಮಿಸಲಿ ಅನ್ನೋದು 140 ಕೋಟಿ ಭಾರತೀಯರ ಪ್ರಾರ್ಥನೆ. ಅಭಿಮಾನಿಗಳ ಬೆಂಬಲವೂ ರೋಹಿತ್‌ ಶರ್ಮಾ ಪಡೆಯ ಬೆನ್ನಿಗೆ ಇರಲಿದೆ. 1992 ರಿಂದ 2019ರ ವರೆಗೂ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, 7 ಬಾರಿಯೂ ವಿಜಯದ ಮಾಲೆ ಹಾಕಿಕೊಂಡಿದೆ. ಈ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್ ಆಗಿದೆ. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದ್ದರೆ, ಮೊದಲ ಜಯ ಸಾಧಿಸಿ ಇತಿಹಾಸ ಸೃಷ್ಟಿಸುವ ತವಕದಲ್ಲಿದೆ.

ಭಾರತ ತಂಡದಲ್ಲಿರುವ ಬ್ಯಾಟರ್‌ಗಳೆಲ್ಲರೂ ಕ್ರಿಕೆಟ್ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬೌಲರ್‌ಗಳೂ ಒಬ್ಬರಿಗಿಂತ ಒಬ್ಬರು ದೊಡ್ಡ ರೆಕಾರ್ಡ್‌ ಮಾಡಿದವರಿದ್ದಾರೆ. ಈ ಪಂದ್ಯದಲ್ಲಿ ಲಯ, ಸಾಮರ್ಥ್ಯ, ಪ್ರತಿಭೆ ಇವೆಲ್ಲಕ್ಕಿಂತ ಮಿಗಿಲಾಗಿ ಯಾರು ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಾರೋ ಅವರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆ. ಹೀಗಾಗಿ ರೋಹಿತ್‌ ಪಡೆಗಿರುವ ಅತಿದೊಡ್ಡ ಸವಾಲು ಭಾವನೆಗಳ ಬಂಧನಕ್ಕೆ ಒಳಗಾಗದಿರುವುದು.

ಅಫ್ಘಾನಿಸ್ತಾನ ವಿರುದ್ಧ ಸಿಡಿಲಬ್ಬರದ ಆಟವಾಡಿದ್ದ ರೋಹಿತ್, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದ್ದು, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಸಹ ನಿರ್ಣಾಯಕ ಪಾತ್ರ ವಹಿಸಬೇಕಾಗುತ್ತದೆ.  ಅಹಮದಾಬಾದ್‌ನ ಇತ್ತೀಚಿನ ದಾಖಲೆಯನ್ನು ಪರಿಗಣಿಸಿ, ವೇಗದ ಬೌಲರ್‌ಗಳಿಗೆ ಹೆಚ್ಚು ನೆರವು ಸಿಗಲಿದೆ ಎನ್ನುವ ನಂಬಿಕೆಯೊಂದಿಗೆ ಭಾರತ ಕಣಕ್ಕಿಳಿದರೆ ಮೊಹಮದ್ ಶಮಿಗೆ ಅವಕಾಶ ಸಿಗಬಹುದು. ಶಮಿ ಐಪಿಎಲ್‌ನಲ್ಲಿ ಗುಜರಾತ್ ತಂಡದಲ್ಲಿ ಆಡುವ ಕಾರಣ, ಇಲ್ಲಿನ ಪಿಚ್ ಬಗ್ಗೆ ಅವರಿಗೆ ಹೆಚ್ಚಿನ ಮಾಹಿತಿ ಇರಲಿದೆ. ಒಂದು ವೇಳೆ ದೊಡ್ಡ ಬೌಂಡರಿಗಳು ಎನ್ನುವ ಅಂಶವನ್ನು ತಲೆಯಲ್ಲಿಟ್ಟುಕೊಂಡು ಆಡುವ ಹನ್ನೊಂದನ್ನು ನಿರ್ಧರಿಸಿದರೆ ಆಗ ಆರ್.ಅಶ್ವಿನ್‌ರನ್ನು ಆಡಿಸಬಹುದು ಎಂದು ಹೇಳಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 hour ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

8 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

16 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

18 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

24 hours ago