ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

December 28, 2023
2:33 PM

ಜನವರಿ 22… ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್(Yogi Adityanatha) ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಉತ್ತರ ಪ್ರದೇಶದ ಅಯೋಧ್ಯೆಯ (Ayodhye Uttarpradesh) 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

Advertisement

ಅಬಕಾರಿ ಇಲಾಖೆಗೆ ಸೂಚನೆ: ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಮತ್ತು ಸುಲ್ತಾನ್‌ಪುರ ಪ್ರದೇಶಗಳು ಸಹ ಈ ವ್ಯಾಪ್ತಿಯಲ್ಲಿ ಬರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿಯೂ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಅಲ್ಲಿರುವ ಮದ್ಯದಂಗಡಿಗಳನ್ನು ಕೂಡ ಸ್ಥಳಾಂತರಿಸಲಾಗುವುದು. ಅಂಗಡಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
The Yogi government has announced a complete ban on the sale of liquor within 84 km of Ayodhya Uttar Pradesh. Uttar Pradesh Excise Minister Nitin Agarwal shared this information after meeting General Secretary Champat Roy of Sri Ram Janmabhoomi Tirtha Kshetra.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror