MIRROR FOCUS

ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜನವರಿ 22… ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್(Yogi Adityanatha) ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

Advertisement
Advertisement

ಉತ್ತರ ಪ್ರದೇಶದ ಅಯೋಧ್ಯೆಯ (Ayodhye Uttarpradesh) 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಗೆ ಸೂಚನೆ: ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಮತ್ತು ಸುಲ್ತಾನ್‌ಪುರ ಪ್ರದೇಶಗಳು ಸಹ ಈ ವ್ಯಾಪ್ತಿಯಲ್ಲಿ ಬರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿಯೂ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಅಲ್ಲಿರುವ ಮದ್ಯದಂಗಡಿಗಳನ್ನು ಕೂಡ ಸ್ಥಳಾಂತರಿಸಲಾಗುವುದು. ಅಂಗಡಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

The Yogi government has announced a complete ban on the sale of liquor within 84 km of Ayodhya Uttar Pradesh. Uttar Pradesh Excise Minister Nitin Agarwal shared this information after meeting General Secretary Champat Roy of Sri Ram Janmabhoomi Tirtha Kshetra.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

6 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

7 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

7 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

7 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

7 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

8 hours ago