Advertisement
MIRROR FOCUS

ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

Share

ಜನವರಿ 22… ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್(Yogi Adityanatha) ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಉತ್ತರ ಪ್ರದೇಶದ ಅಯೋಧ್ಯೆಯ (Ayodhye Uttarpradesh) 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಗೆ ಸೂಚನೆ: ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಮತ್ತು ಸುಲ್ತಾನ್‌ಪುರ ಪ್ರದೇಶಗಳು ಸಹ ಈ ವ್ಯಾಪ್ತಿಯಲ್ಲಿ ಬರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿಯೂ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಅಲ್ಲಿರುವ ಮದ್ಯದಂಗಡಿಗಳನ್ನು ಕೂಡ ಸ್ಥಳಾಂತರಿಸಲಾಗುವುದು. ಅಂಗಡಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

The Yogi government has announced a complete ban on the sale of liquor within 84 km of Ayodhya Uttar Pradesh. Uttar Pradesh Excise Minister Nitin Agarwal shared this information after meeting General Secretary Champat Roy of Sri Ram Janmabhoomi Tirtha Kshetra.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

5 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

21 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago