Advertisement
MIRROR FOCUS

ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

Share

ಜನವರಿ 22… ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್(Yogi Adityanatha) ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಉತ್ತರ ಪ್ರದೇಶದ ಅಯೋಧ್ಯೆಯ (Ayodhye Uttarpradesh) 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಗೆ ಸೂಚನೆ: ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಮತ್ತು ಸುಲ್ತಾನ್‌ಪುರ ಪ್ರದೇಶಗಳು ಸಹ ಈ ವ್ಯಾಪ್ತಿಯಲ್ಲಿ ಬರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿಯೂ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಅಲ್ಲಿರುವ ಮದ್ಯದಂಗಡಿಗಳನ್ನು ಕೂಡ ಸ್ಥಳಾಂತರಿಸಲಾಗುವುದು. ಅಂಗಡಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

The Yogi government has announced a complete ban on the sale of liquor within 84 km of Ayodhya Uttar Pradesh. Uttar Pradesh Excise Minister Nitin Agarwal shared this information after meeting General Secretary Champat Roy of Sri Ram Janmabhoomi Tirtha Kshetra.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

1 hour ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago