Advertisement
MIRROR FOCUS

ರಾಮಮಂದಿರ ಉದ್ಘಾಟನೆಗೆ ದಿನಗಣನೆ | ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ | ಯೋಗಿ ಸರ್ಕಾರದ ಮಹತ್ವದ ನಿರ್ಧಾರ |

Share

ಜನವರಿ 22… ಇಡೀ ದೇಶದ ಹಿಂದೂಗಳಿಗೆ ಹೆಮ್ಮೆಯ ದಿನ. ಹಲವು ವರ್ಷಗಳ ಕನಸು ಸಾಕಾರಗೊಳ್ಳುವ ಸುಸಂದರ್ಭ. ಅಯೋಧ್ಯೆಯಲ್ಲಿ(Ayodya) ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಭರ್ಜರಿ ತಯಾರಿಗಳು ನಡೆಯುತ್ತಿದೆ. ಈ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೂ ಮುನ್ನ ಯೋಗಿ ಆದಿತ್ಯನಾಥ್(Yogi Adityanatha) ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

Advertisement

ಉತ್ತರ ಪ್ರದೇಶದ ಅಯೋಧ್ಯೆಯ (Ayodhye Uttarpradesh) 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಯೋಗಿ ಸರ್ಕಾರ ಘೋಷಿಸಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಭೇಟಿ ಮಾಡಿದ ನಂತರ ಉತ್ತರ ಪ್ರದೇಶದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ಸಂಪೂರ್ಣ ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಅಲ್ಲದೇ ಈಗಾಗಲೇ ಇರುವಂತಹ ಮದ್ಯದಂಗಡಿಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುವುದು ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಗೆ ಸೂಚನೆ: ಅಯೋಧ್ಯೆಯ ಜೊತೆಗೆ ಫೈಜಾಬಾದ್, ಬಸ್ತಿ, ಅಂಬೇಡ್ಕರ್ ನಗರ ಮತ್ತು ಸುಲ್ತಾನ್‌ಪುರ ಪ್ರದೇಶಗಳು ಸಹ ಈ ವ್ಯಾಪ್ತಿಯಲ್ಲಿ ಬರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿಯೂ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಅಲ್ಲಿರುವ ಮದ್ಯದಂಗಡಿಗಳನ್ನು ಕೂಡ ಸ್ಥಳಾಂತರಿಸಲಾಗುವುದು. ಅಂಗಡಿಗಳನ್ನು ಸ್ಥಳಾಂತರಿಸುವಂತೆ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

The Yogi government has announced a complete ban on the sale of liquor within 84 km of Ayodhya Uttar Pradesh. Uttar Pradesh Excise Minister Nitin Agarwal shared this information after meeting General Secretary Champat Roy of Sri Ram Janmabhoomi Tirtha Kshetra.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

16 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago