ಕುಟುಂಬವನ್ನು ಬೆಸೆದ ಲೋಕ ಅದಾಲತ್‌ | 13 ವರ್ಷಗಳ ವಿರಸಕ್ಕೆ ಮುಕ್ತಿ | ಸಮರಸ ಜೀವನಕ್ಕೆ ಹೆಜ್ಜೆ ಇರಿಸಿದ ದಂಪತಿ |

November 13, 2022
7:21 PM

ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ  ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್‌ ಲೋಕ್​ ಅದಾಲತ್​​ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.

ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು.  . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.

ಶನಿವಾರ ನಡೆದ ಲೋಕ್​ ಅದಾಲತ್​ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror