ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.
ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು. . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.
ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…