ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.
ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು. . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.
ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…