ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.
ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು. . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.
ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…