ಕಳೆದ 13 ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ಬೇರ್ಪಟ್ಟಿದ್ದ ದಂಪತಿಯನ್ನು ಉಡುಪಿಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ಮತ್ತೆ ಒಂದು ಮಾಡಿದೆ. ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ದಂಪತಿ ವೈಮನಸ್ಸು ಮರೆತು ಒಂದಾಗಿದ್ದಾರೆ.
ಬ್ರಹ್ಮಾವರದ ಯುವಕ ಮತ್ತು ಮಂಗಳೂರಿನ ಮಹಿಳೆಯ ವಿವಾಹವು 2003ರ ಜೂ.27ರಂದು ಮಂಗಳೂರಿನಲ್ಲಿ ನಡೆದಿತ್ತು. . ಆದರೆ, ಗಂಡ ತನ್ನನ್ನು ಮತ್ತು ಮಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಮಗಳ ಮೇಲೆ ಪ್ರೀತಿ ತೋರಿಸುತ್ತಿಲ್ಲವೆಂದು ಕಳೆದ 13 ವರ್ಷಗಳಿಂದ ಗೀತಾ ದೂರವಾಗಿದ್ದರು. ಗಂಡನ ಮನೆ ತೊರೆದು ತನ್ನ ಮಗಳೊಂದಿಗೆ ಪ್ರತ್ಯೇಕವಾಗಿ ಉಡುಪಿಗೆ ಬಂದು ಗೀತಾ ವಾಸಿಸುತ್ತಿದ್ದರು. ಪತಿ ಮತ್ತು ಪತ್ನಿಯನ್ನು ಒಂದು ಮಾಡಲು ಹಲವಾರು ಬಾರಿ ರಾಜೀ ಪಂಚಾಯಿತಿ ನಡೆದರೂ ಫಲಕಾರಿಯಾಗಿರಲಿಲ್ಲ.
ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ನ್ಯಾಯಾಧೀಶರು ಮತ್ತು ವಕೀಲರ ಸತತ ಪ್ರಯತ್ನದಿಂದಾಗಿ ಈ ಪ್ರಕರಣ ಇತ್ಯರ್ಥಗೊಂಡಿದ್ದು, ದಂಪತಿ ಒಂದಾಗಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…