ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.
16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…