ಆಂಬುಲೆನ್ಸ್ ನಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟರೆ ಮೃತ ವ್ಯಕ್ತಿ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು

January 27, 2023
9:59 PM

ಕಾಯಿಲೆಯಿಂದ ಬಳಲುತ್ತಿರುವ ರೋಗಿ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಹೋಗುವ ವೇಳೆ ಅದು ಅಪಘಾತಕ್ಕೀಡಾಗಿ ಸಾವನ್ನಪ್ಪಿದರೆ ಅಂತಹ ಸಂದರ್ಭದಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಅಪಘಾತ ವಿಮೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

Advertisement

ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಬ್ಬಿನಹಳ್ಳಿ ಗ್ರಾಮದ ವಾಸಿ ರವಿ ಎಂಬವರನ್ನು 2010ರ ಏಪ್ರಿಲ್ 13ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವೇಗವಾಗಿ ಸಾಗುತ್ತಿದ್ದ ಅಂಬುಲೆನ್ಸ್ ಅಲಪೆ ಗ್ರಾಮದ ಕೊಡೇಕಲ್ ರೈಲ್ವೆ ಮೇಲ್ಸೆತುವೆ ಬಳಿ ಮಗಚಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ರವಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಹೀಗಾಗಿ ರವಿ ಕುಟುಂಬಸ್ಥರು ಅಪಘಾತ ವಿಮೆ ಪರಿಹಾರ ಕೋರಿದ್ದು, ನ್ಯಾಯಾಧಿಕರಣ 5.50 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಆದೇಶಿಸಿತ್ತು. ಆದರೆ ರವಿ ಅಪಘಾತದಿಂದ ಮೃತಪಟ್ಟಿಲ್ಲ ಕಾಯಿಲೆಯಿಂದ ಸಾವು ಸಂಭವಿಸಿದೆ ಎಂದು ವಿಮಾ ಕಂಪನಿ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಧಿಕರಣದ ಆದೇಶವನ್ನು ಎತ್ತಿ ಹಿಡಿದ ನ್ಯಾಯಪೀಠ ಪರಿಹಾರ ಮೊತ್ತವನ್ನು 4.62 ಲಕ್ಷ ರೂಪಾಯಿಗಳಿಗೆ ಇಳಿಕೆ ಮಾಡಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group