ಪ್ರಾಣಿಗಳಿಗೂ ಬಂದಿದೆ ಭಾರತದ ಸ್ವದೇಶಿ ಕೋವಿಡ್ ಲಸಿಕೆ……!

June 10, 2022
6:28 PM

ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್  ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್  ಬಿಡುಗಡೆ ಮಾಡಿದ್ದಾರೆ.

ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್‌, ರೂಪಾಂತರ ವೈರಸ್‌ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.

ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್‌ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್‌ ಹೇಳಿದರು.

ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror