Advertisement
ರಾಷ್ಟ್ರೀಯ

ಪ್ರಾಣಿಗಳಿಗೂ ಬಂದಿದೆ ಭಾರತದ ಸ್ವದೇಶಿ ಕೋವಿಡ್ ಲಸಿಕೆ……!

Share

ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್  ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್  ಬಿಡುಗಡೆ ಮಾಡಿದ್ದಾರೆ.

ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್‌, ರೂಪಾಂತರ ವೈರಸ್‌ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.

ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್‌ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್‌ ಹೇಳಿದರು.

ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

8 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

21 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago