ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…