ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…