ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…