ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಅಭಿವೃದ್ಧಿಪಡಿಸಿದ ಪ್ರಾಣಿಗಳಿಗಾಗಿ ದೇಶದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ಅನೋಕೊವಾಕ್ಸ್ ಅನ್ನು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬಿಡುಗಡೆ ಮಾಡಿದ್ದಾರೆ.
ಪ್ರಾಣಿಗಳಿಗೆ ರೋಗನಿರೋಧಕ ಶಕ್ತಿ ಉಂಟು ಮಾಡುವ ಹಾಗೂ ಕೊರೋಲಾ ವೈರಸ್, ರೂಪಾಂತರ ವೈರಸ್ , ಡೆಲ್ಟಾ ಮತ್ತು ಓಮಿಕ್ರಾನ್ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹೇಳಿಕೆಯಲ್ಲಿ ತಿಳಿಸಿದೆ. ಇದು ನಾಯಿಗಳು, ಸಿಂಹಗಳು, ಚಿರತೆಗಳು, ಇಲಿಗಳು ಮತ್ತು ಮೊಲಗಳಿಗೆ ಸುರಕ್ಷಿತವಾಗಿದೆ ಎಂದು ಇಲಾಖೆ ಹೇಳಿದೆ.
ಈ ರೋಗವು ಭಾರತದ ಎಲ್ಲಾ ಕೃಷಿ-ಹವಾಮಾನ ಭಾಗಗಳಲ್ಲಿ ವ್ಯಾಪಕವಾಗಿದೆ. ಭಾರತದಲ್ಲಿ, ಜಾನುವಾರು ಉತ್ಪಾದಕತೆಗೆ ವಾರ್ಷಿಕವಾಗಿ 44,740 ಮಿಲಿಯನ್ ನಷ್ಟಗಳು ಎಂದು ಅಂದಾಜಿಸಲಾಗಿದೆ. ಹೀಗಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಇಂತಹ ಅನ್ವೇಷಣೆ ಅಗತ್ಯ ಎಂದು ಥೋಮರ್ ಅಭಿಪ್ರಾಯಪಟ್ಟರು. ವಿಜ್ಞಾನಿಗಳ ಅವಿರತ ಕೊಡುಗೆಗಳಿಂದಾಗಿ ದೇಶವು ಆಮದು ಮಾಡಿಕೊಳ್ಳುವುದಕ್ಕಿಂತ ಹೆಚ್ಚಾಗಿ ತನ್ನದೇ ಆದ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಾವಲಂಬಿಯಾಗಿ ನಿಂತಿದೆ. ಇದು ನಿಜವಾಗಿಯೂ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಥೋಮರ್ ಹೇಳಿದರು.
ಐಸಿಎಆರ್ ಮಹಾನಿರ್ದೇಶಕ ತ್ರಿಲೋಚನ್ ಮೊಹಾಪಾತ್ರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಕಾರ್ಯದರ್ಶಿ ಅತುಲ್ ಚತುರ್ವೇದಿ, ಐಸಿಎಆರ್ ಉಪ ಮಹಾನಿರ್ದೇಶಕ (ಪ್ರಾಣಿ ವಿಜ್ಞಾನ) ಭೂಪೇಂದ್ರ ನಾಥ್ ತ್ರಿಪಾಠಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…